Friday, December 18, 2015

ತುತ್ತು ಅನ್ನ

ಕೈ ಯಿಂದ  ಎಸೆದ ಕಲ್ಲು
ನೂರು ಅಡಿ ಹೋಗಿ ಬೀಳುತ್ತದೆ .

ಬಂದೂಕಿನಿಂದ ಹೊರಟ ಗುಂಡು
ಸಾವಿರ ಅಡಿ ದೂರ ಬೀಳುತ್ತದೆ.

ಪಿರಂಗಿಯಿಂದ ಹೊರಟ ಬೆಂಕಿ ಉಂಡೆ
ಐದು ಕಿಲೋಮೀಟರ್ ದೂರ ಹೋಗುತ್ತದೆ.

ಆದರೆ ಒಬ್ಬ ಬಡವನಿಗೆ ಕೊಟ್ಟ ರೊಟ್ಟಿಯ ತುಂಡು
ಸ್ವರ್ಗದ ಬಾಗಿಲಿನವರೆಗೂ ಹೋಗುತ್ತದೆ...

☝🏻
ಜಾತಿ ಮತ ನೋಡ ಬೇಡಿ
ಬೇದ ಭಾವ ಮಾಡ ಬೇಡಿ
ಹೊಟ್ಟೆ ಹಸಿದು ಬಂದವರಿಗೆ ಒಂದು ತುತ್ತು ಅನ್ನ ಹಾಕಿ!!

Tuesday, December 15, 2015

ಅಂತರಂಗ ಶುದ್ಧಿ

ಸ್ನೇಹಿತರೆ,

ಇದು ನಿಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ:~

ಗುರುಕುಲದಲ್ಲಿ ಓದುತ್ತಿದ್ದ  ಶಿಷ್ಯರು ಒಮ್ಮೆ ತಮ್ಮ ಗುರುಗಳ ಬಳಿ ಬಂದು,
"ಗುರುಗಳೇ ನಾವೆಲ್ಲಾ ತೀರ್ಥಯಾತ್ರೆ ಮಾಡಬೇಕು ಎಂದುಕೊಂಡಿದ್ದೇವೆ. ತಾವು ಸಮ್ಮತಿಸಿದರೆ ಪುಣ್ಯಕ್ಷೇತ್ರಗಳಿಗೆ ತೆರಳಿ ಪವಿತ್ರ ಸ್ನಾನ ಮಾಡಿ ದೇವರ ದರ್ಶನ ಮಾಡಿ ಬರುತ್ತೇವೆ" ಎಂದು ಹೇಳಿ ಯಾತ್ರೆಗೆ ಅನುಮತಿ ಕೋರಿದರು.

ನೀವು ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಉದ್ದೇಶವೇನು? ಎಂದು ಗುರುಗಳು ತಮ್ಮ ಶಿಷ್ಯರಿಗೆ ಕೇಳಿದರು.

ಇದಕ್ಕೆ ಉತ್ತರಿಸಿದ ಶಿಷ್ಯರು,
"ಗುರುಗಳೇ ನಾವು ಅಂತರಂಗಶುದ್ಧಿಗಾಗಿ ತೀರ್ಥಯಾತ್ರೆ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

"ಸಂತೋಷ ಹೋಗಿಬನ್ನಿ ಶುಭವಾಗಲಿ" ಎಂದ ಗುರುಗಳು, ಯಾತ್ರೆಗೆ ಹೊರಟ ಶಿಷ್ಯರೆಲ್ಲರಿಗೂ ಒಂದೊಂದು ಹಾಗಲಕಾಯಿ ಕೊಟ್ಟು,
"ಈ ಕಾಯನ್ನೂ ನಿಮ್ಮ ಜೊತೆ ತೆಗೆದುಕೊಂಡು ಹೋಗಿ, ನೀವು ಎಲ್ಲೆಲ್ಲಿ ಸ್ನಾನ ಮಾಡುತ್ತೀರೋ ಅಲ್ಲಿ ಈ ಹಾಗಲ ಕಾಯಿಗೂ ಸ್ನಾನ ಮಾಡಿಸಿ. ನೀವು ಎಲ್ಲೆಲ್ಲಿ ದೇವರ ದರ್ಶನ ಪಡೆಯುತ್ತೀರೋ ಅಲ್ಲಿ ದೇವರ ಪಾದದ ಬಳಿ ಈ ಕಾಯಿಗಳನ್ನು ಇಟ್ಟು ಪೂಜೆ ಮಾಡಿಸಿಕೊಂಡು ಬನ್ನಿ" ಎಂದು ತಿಳಿಸಿದರು.

ಸರಿ ಎಂದ ಶಿಷ್ಯರು ಹಾಗಲಕಾಯಿಯ ಜೊತೆ ಯಾತ್ರೆ ಹೊರಟು ಒಂದು ವಾರದ ಬಳಿಕ ಹಿಂತಿರುಗಿದರು.

ಶಿಷ್ಯರನ್ನು ಕಂಡ ಗುರುಗಳು,
"ಏನು ಕ್ಷೇತ್ರ ದರ್ಶನದಿಂದ ನೀವೆಲ್ಲ ಪುನೀತರಾದಿರಾ ನಿಮ್ಮ ಅಂತರಂಗ ಶುದ್ಧಿಯಾಯಿತೇ?" ಎಂದು ಕೇಳಿದರು.

ಎಲ್ಲ ಶಿಷ್ಯರೂ ಒಕ್ಕೊರಲಿನಿಂದ ಹೌದೆಂದರು.
ಆಗ  ಗುರುಗಳು "ನೀವು ಯಾತ್ರೆಗೆ ಹೊರಡುವಾಗ ನಾನು ಕೊಟ್ಟಿದ್ದ ಹಾಗಲಕಾಯಿಗಳಿಗೆ ನದಿಯಲ್ಲಿ ಪವಿತ್ರ ಸ್ನಾನ ಮಾಡಿಸಿದಿರಾ?, ದೇವರ ಬಳಿ ಇಟ್ಟು ಪೂಜೆ ಮಾಡಿಸಿದಿರಾ?"  ಎಂದು ಕೇಳಿದರು.

ಶಿಷ್ಯರು ಹೌದೆಂದರು.

"ಸರಿ ಹಾಗಾದರೆ ಈ ಕಾಯಿಗಳನ್ನು ಹಾಕಿ ಇಂದು ಅಡುಗೆ ಮಾಡಿಸಿ" ಎಂದು ಅಪ್ಪಣೆ ಕೊಡಿಸಿದರು.

ಊಟಕ್ಕೆ ಕುಳಿತಾಗ ಹಾಗಲ ಕಾಯಿ ತಿಂದ ಗುರುಗಳು,
"ಅಯ್ಯೋ! !!.. ಇದೇನು ಇಷ್ಟು ಕಹಿಯಾಗಿದೆ?" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೆ ಉತ್ತರ ಕೊಟ್ಟ ಶಿಷ್ಯ
"ಅಲ್ಲ ಗುರುಗಳೇ ಹಾಗಲ ಕಾಯಿಯ ಗುಣವೇ ಕಹಿ ಅದು ಸಿಹಿ ಆಗಲು ಹೇಗೆ ಸಾಧ್ಯ?" ಎಂದು ಕೇಳಿದರು.

ಆಗ ಗುರುಗಳು ಹೇಳಿದರು
"ಪವಿತ್ರ ಸ್ನಾನ ಮಾಡಿ, ದೇವರ ದರ್ಶನ ಮಾಡಿದ ಮಾತ್ರಕ್ಕೆ ನಿಮ್ಮ ಅಂತರಂಗಶುದ್ಧಿ ಆಗುವುದಾದರೆ ಈ ಹಾಗಲ ಕಾಯಿಯೂ ನಿಮ್ಮೊಂದಿಗೆ ಎಲ್ಲ ಕ್ಷೇತ್ರಗಳಲ್ಲಿ ಪವಿತ್ರ ಸ್ನಾನ ಮಾಡಿ ಪುನೀತವಾಗಿದೆ. ದೇವರ ದರ್ಶನದಿಂದ ಇದರ ಅಂತರಂಗ ಶುದ್ಧಿ ಆಗಿರಬೇಕಲ್ಲ. ಹಾಗಾದರೆ ಸಿಹಿ ಆಗುವ ಬದಲು ಕಹಿ ಏಕಾಯಿತು?" ಎಂದು ಪ್ರಶ್ನಿಸಿದರು.

ಗುರುಗಳ ಅಂತರ್ಯ ಅರಿತ ಶಿಷ್ಯರು ತಲೆ ತಗ್ಗಿಸಿ ನಿಂತರು.

ಆಗ ಗುರುಗಳು ಹೇಳಿದರು
"ಮಾಡುವ ಪಾಪವನ್ನೆಲ್ಲಾ ಮಾಡಿ ದೇವರ ಬಳಿ ಹೋದರೆ ನೀವು ಪುನೀತರಾಗುವುದಿಲ್ಲ.
ನಿಮ್ಮಲ್ಲಿ ದುರ್ಗುಣ ತುಂಬಿಕೊಂಡು ಪುಣ್ಯ ಸ್ನಾನ ಮಾಡಿದರೆ ನಿಮ್ಮ ಅಂತರಂಗ ಶುದ್ಧಿ ಆಗುವುದಿಲ್ಲ.
ಮೊದಲು ನಿಮ್ಮ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಿ.
ಸತ್ಯವನ್ನೇ ನುಡಿಯಿರಿ,
ಧರ್ಮದಿಂದ ನಡೆಯಿರಿ,
ಎಲ್ಲರನ್ನೂ ನಿಮ್ಮಂತೆಯೇ ಕಾಣಿ.
ಮೋಸ, ವಂಚನೆ ಮಾಡಬೇಡಿ, ಜಗತ್ತಿನಲ್ಲಿರುವ ಎಲ್ಲವೂ ನನಗೇ ಬೇಕು ಎಂದು ಕೂಡಿಡುವ ಮನೋಸ್ಥಿತಿ ಬಿಡಿ (ಭ್ರಷ್ಟಾಚಾರ),
ನಿಮ್ಮ ಬದುಕನ್ನು ಪರೋಪಕಾರಕ್ಕೆ ಮೀಸಲಿಡಿ.
ಆಗ ಭಗವಂತನೂ ಮೆಚ್ಚುತ್ತಾನೆ.
ನೀವೂ ಪುನೀತರಾಗುತ್ತೀರಿ" ಎಂದು ಹೇಳಿದರು.

ಈ ಪುಟ್ಟ ಕಥೆ ಎಷ್ಟು ಅರ್ಥಪೂರ್ಣ ಅಲ್ಲವೇ.?

ಯೋಚಿಸೋಣ ಚಿಂತಿಸೋಣ.

"ಮೂರು" ಅಪ್ಪಣೆಗಳು

ಜಗತ್ತನ್ನೆ ಗೆದ್ದ ಅಲೆಕ್ಸಾಂಡರ್ ತನ್ನ ಮರಣ ಕಾಲದ ಒಂದು ದಿನ ತನ್ನ ಸೇನಾಧಿಪತಿಯನ್ನು ಕರೆದು "ಮೂರು" ಅಪ್ಪಣೆ ಮಾಡಿದ.

೧. ನನ್ನ ಮರಣದ ನಂತರ, ನನ್ನ ಶವ ಪೆಟ್ಟಿಗೆಯನ್ನು ಇಡೀ ದೇಶಗಳಲ್ಲಿನ ಪ್ರಸಿದ್ದ ವೈದ್ಯರಾದವರು ಹೊರಬೇಕು.

೨. ನನ್ನ ಅಧಿಕಾರದ ಅವಧಿಯಲ್ಲಿ ಸಂಪಾದನೆ ಮಾಡಿದ ಎಲ್ಲ ಹೊನ್ನು, ವಜ್ರ, ಬೆಲೆ ಬಾಳುವ ಮಣಿ ಗಳನ್ನು, ನನ್ನನ್ನು ಸ್ಮಶಾನಕ್ಕೆ ಕೊಂಡೊಯ್ಯುವ ದಾರಿಯುದ್ದಕ್ಕೂ ಎಸೆದು ಚಲ್ಲಬೇಕು.

೩. ನನ್ನ ಎರಡೂ ಕೈಗಳು ಶವಪೆಟ್ಟಿಯ ಹೊರಗೆ ಎಲ್ಲರಿಗೂ ಕಾಣಿಸುವಂತೆ ಇರಿಸಬೇಕು.

ಅರ್ಥವಾಗದ ಸೇನಾಧಿಪತಿ , ಈ ತಮ್ಮ ಕೋರಿಕೆ ಏಕೆಂದು ಕೇಳಬಹುದೇ ಎಂದು ಅರಿಕೆ ಮಾಡಿಕೊಂಡ.

ಅಲೆಕ್ಸಾಂಡರ್ ನ ಉತ್ತರ ಹೀಗಿತ್ತು!

೧.ಇಡೀ ದೇಶಗಳಲ್ಲಿರು ಪ್ರಖ್ಯಾತರಾದ ವೈದ್ಯರಿಂದಲೂ ನನ್ನನ್ನು ಉಳಿಸಲು ಸಾಧ್ಯವಿಲ್ಲ ಎಂಬ ಅರಿವು ಜನರಲ್ಲಿ ಮೂಡಿಸಲು ಪ್ರಖ್ಯಾತ ವೈದ್ಯರು ನನ್ನ ಶವ ಪೆಟ್ಟಿಗೆ ಹೊರಲು ಹೇಳಿದೆ.

೨. ನನ್ನ ಆಡಳಿತ ಕಾಲದಲ್ಲಿ ಸಂಪಾದಿಸಿದ ಎಲ್ಲವೂ ಈ ಮಣ್ಣಿನಿಂದ ಬಂದಿದ್ದು ಅದನ್ನು ನಾನು ಕೊಂಡೊಯ್ಯಲಾಗದು ಹಾಗಾಗಿ ಅದು ಮತ್ತೆ ಮಣ್ಣಿನಲ್ಲೇ ಉಳಿಯಲಿದೆ ಎಂಬುದನ್ನು ಪ್ರಜೆಗಳಿಗೆ ತಿಳಿಸಲೆಂದು ಎಸಯಲಿಕ್ಕೆ ಹೇಳಿದೆ.

೩. ಇನ್ನು ಶವಪೆಟ್ಟಿಯ ಹೊರಗಿಟ್ಟ ನನ್ನ ಎರಡೂ ಕೈಗಳನ್ನೂ ಪ್ರಜೆಗಳು ನೋಡುವ ಉದ್ದೇಶ!

ನಾನು ಹುಟ್ಟದಾಗ ಬರಿಗೈಲಿ ಬಂದೆ ಮತ್ತು ಹೋಗುವಾಗ ಬರಿಗೈಯಲ್ಲಿ ಹೋಗುತ್ತಿದ್ದೇನೆ ಎಂಬುದನ್ನು ಜನರು ನೋಡಲೆಂದು ಹೇಳಿದೆ.

ನೀತಿ:
ಕಾಲವೆಂಬುದು ಎಲ್ಲಕ್ಕೂ ಮೀರಿದ್ದು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಬದುಕಿರುವಷ್ಟು ದಿನ, ಸಮಯ ಉತ್ತಮ ಕೆಲಸವನ್ನು ಮಾಡಬೇಕು. ಅವುಗಳು ಮಾತ್ರವೇ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ. ಗಳಿಸಿದ ವಸ್ತುಗಳಾವುವು ನಮ್ಮೊಡನೆ ಬರಲಾರವು. "ಗೀತೆ ನುಡಿ "

ಹುಟ್ಟಿದಾಗ ನೀ ಅಳುತ್ತಿದ್ದೆ,
   ಮಡಿದಾಗ ನಿನ್ನವರು ಅಳುತ್ತಿದ್ದರು.

ಹುಟ್ಟಿದಾಗ ನಿನಗೆ ವಸ್ತ್ರ ತೊಡಿಸುವರು,
         ಮಡಿದಾಗ ನಿನ್ನ ವಸ್ತ್ರವ ಬಿಚ್ಚುವರು.

           ಹುಟ್ಟಿದಾಗ  ಹುಡುಕುವರು ನಿನಗೆ
                             ನೂರೆಂಟು ನಾಮ,
                    ಮಡಿದಮೇಲೆ ಶವ ಎಂದೇ
                                    ನಿನ್ನ ನಾಮ.

   ನೀನೇನನ್ನೂ ಗಳಿಸದೇ ಬಂದೆ,
                           ಮಡಿದಾಗ
ನೀನು ಗಳಸಿದ್ದನ್ನು ಕಳದುಕೊಂಡೆ.

ಓ ಮಾನವಾ..
              ಮಡಿದಾಗ ಮಣ್ಣಲ್ಲಿ ಮರಳಾಗಿ
                              ಹೊಗುವ ನೀನು
               ನಿನ್ನದು ಎನ್ನಲು ನಿನಗೇನಿದೆ,

     ನಿನಗೆ ಜನ್ಮ ಕೊಟ್ಟವರು ಮತ್ತೊಬ್ಬರು,

     ನಿನಗೆ ಹೆಸರು ಕೊಟ್ಟದ್ದು ಮತ್ತೊಬ್ಬರು,

ನಿನಗೆ ಜ್ಙಾನ ಹೇಳಿ ಕೊಟ್ಟದ್ದು ಮತ್ತೊಬ್ಬರು,

ಕಡೆಗೆ ನಿನ್ನ ಅಂತ್ಯ ಸಂಸ್ಕಾರ
       ನಿರ್ವಹಿಸುವುದು ಕೂಡಾ ಮತ್ತೊಬ್ಬರೇ.

ನಾನು ಎಂದು ಅಹಂಕರಿಸಲು
                     ನಾನು ಯಾರು ?
                              ಏನಿದೇ ನನ್ನಲ್ಲಿ ?

ಚಿಂತಿಸುವವನಿಗೆ ದೃಷ್ಟಾಂತವಿದೆ.
💐💐🌹💐💐

ಮನಮುಟ್ಟಿದ ಸಾಲುಗಳು..


1." ನೀವೇನನ್ನು ಬಯಸುತ್ತೀರೋ
ಅದನ್ನು ಪಡೆಯಲಾರಿರಿ. ಏನನ್ನು ಪಡೆದಿದ್ದೀರೋ ಅದನ್ನು ಅನುಭವಿಸಲಾರಿರಿ. ಏನನ್ನು ಅನುಭವಿಸುತ್ತಿದ್ದೀರೋ ಅದು ಶಾಶ್ವತವಲ್ಲ. ಯಾವುದು ಶಾಶ್ವತವೋ ಅದು ಬೇಸರ.
ಅದೇ ಬದುಕು"...
💭💝🎁😳😔😒😞
2. "ಎಲ್ಲಾ ಬೆರಳುಗಳೂ ಒಂದೇ ರೀತಿಯ ಅಳತೆಯನ್ನು ಹೊಂದಿಲ್ಲ.ಆದರೆ ಅವು ಬಗ್ಗಿ ನಿಂತರೆ ಎಲ್ಲವೂ ಒಂದೇ ಸಮನಾದೀತು. ಬದುಕಿನಲ್ಲೂ ಹಾಗೆ ನಾವು ಬಾಗುವುದಾದರೆ ಮತ್ತು ಸನ್ನಿವೇಶಗಳಿಗೆ ಹೊಂದಿಕೊಳುವುದಾದರೆ ಬದುಕು ತುಂಬಾ ಸರಳ"..
✋🏻✊🏻👊🏻🙌🏻🚶🏻🏃🏻🙏🏻
3. "ಜೀವನದ ಎಲ್ಲಾ ಕ್ಷಣಗಳೂ ನಿಮಗೆ ಸಂತೋಷದಾಯಕ ಆಗಲಾರದು. ದಿನದ ಎಲ್ಲಾ ಘಟನೆಗಳು ನಿಮಗೆ
ಸಮಧಾನವೆನಿಸಲಾರದು. ಆದರೆ ಒಂದು ಸಂಗತಿ ಮಾತ್ರ ನಿಮಗೆ ಅತ್ಯಂತ ಖುಷಿಯೆನಿಸುವದು.
ಅದು ಯಾವುದೆಂದರೆ ಬೇರೆಯವರ
ಕಣ್ಣುಗಳಲಿ ನೀವು ಕಾಣುವ ನಿಮ್ಮ ಬಗೆಗಿನ ಕಾಳಜಿ"...
👩🏼👨🏻👫💞💏💘💑
4. "ಒಂದು ಪಾತರಗಿತ್ತಿ 14 ದಿನಗಳ ಕಾಲ ಮಾತ್ರ ಬದುಕುಳಿಯುವದು. ಆದರೆ ಅದು ಪ್ರತಿದಿನ ಅತ್ಯಂತ ಸಂತೋಷದಿಂದ ಹಾರಾಡುವದು ಮತ್ತು ಹಲವರ ಹೃದಯಗಳನ್ನ ಗೆಲ್ಲುವುದು ಪ್ರತಿ ಕ್ಷಣವೂ ಅತ್ಯಂತ ಪ್ರಮುಖ. ಯಾವಾಗಲೂ ಸುಖ ಸಂತೋಷದಿಂದಿರಿ"...
💐🐛🐝💕😍😎😃
5. "ಕಾಲಿಗೆ ಬೂಟುಗಳಿಲ್ಲವೆಂದು ನಾನು ಅಳುತ್ತಿದ್ದೆ. ಆದರೆ ಕಾಲುಗಳೇ ಇಲ್ಲದ ವ್ಯಕ್ತಿಯನು ಕಂಡಾಗ ನಾನು ಅಳುವುದನ್ನು ನಿಲ್ಲಿಸಿಬಿಟ್ಟೆ. ಬದುಕು ಆಶೀರ್ವಾದಗಳ ಸಂತೆ.ನಾವು ಅದನ್ನು ಅರ್ಥ ಮಾಡಿಕೊಳ್ಳಬೇಕು"...
👣👟👞👡👠👢
👤👿🔥🌍🌠⭐
6. "ನೋವುಂಡ ಹೃದಯ ಸಣ್ಣ ಮಕ್ಕಳಂತೆ. ಅದು ಅಳಬಹುದೇ ಹೊರತು ತನ್ನ ಭಾವನೆಗಳನು ಹಂಚಿಕೊಳ್ಳದು .ಆದ್ದರಿಂದ ನಿಮ್ಮನ್ನು ಪ್ರೀತಿಸುವ ಮತ್ತು ನಿಮ್ಮ ಮೇಲೆ ಕಾಳಜಿ ತೋರುವ ಯಾರನ್ನು ನೋಯಿಸಬೇಡಿ"...
👦🏻👧🏻👶🏻💓👉🏻💔👋🏻
7. "ಒಳ್ಳೆಯ ರಸ್ತೆ ಒಬ್ಬ ಒಳ್ಳೆಯ ಚಾಲಕನನ್ನು ರೂಪಿಸಲಾರದು. ಶಾಂತವಾಗಿರುವ ಸಾಗರ ಒಬ್ಬ ಒಳ್ಳೆಯ ನಾವಿಕನನು ರೂಪಿಸಲಾರದು. ತಿಳಿಯಾದ ಆಕಾಶ ಒಬ್ಬ ಒಳ್ಳೆಯ ವಿಮಾನ ಚಾಲಕನನ್ನು ರೂಪಿಸಲಾರದು. ಸಮಸ್ಯೆಗಳೇ ಇಲ್ಲದ ಜೀವನ ಎಂದಿಗೂ ಸಾಧಕರನು ರೂಪಿಸದು"...
🚙🚴🚕🚘🚗🚖🚕
8. "ಸಮಯ ನಮಗಾಗಿ ಕಾಯುವುದಿಲ್ಲ ಎಂದಾದರೆ ನಾವೇಕೆ ಯೋಗ್ಯ ಸಮಯಕ್ಕಾಗಿ ಯಾವಾಗಲೂ ಕಾಯಬೇಕು?
ಒಳ್ಳೆಯ ಕೆಲಸ ಮಾಡುವುದಕೆ ಯಾವಾಗಲೂ ಕೆಟ್ಟ ಸಮಯ ಎಂದಿರುವದಿಲ್ಲ"...

ನೆನಪಿಸು...

(ಸ.ಅ)

ಆಹಾರ ರುಚಿ ಸಾಕಾಗುವುದಿಲ್ಲವೇ
ಹಸಿದ ಹೊಟ್ಟೆಗೆ ಕಲ್ಲು ಕಟ್ಟಿ ಬದುಕಿದ ವಿಶ್ವನಾಯಕನ
ನೆನಪಿಸು...

ಅಂದ ಚೆಂದದ ಬೆಲೆ ಬಾಳುವ ಉಡುಪು ಕೊರತೆಯೇ
ಎರಡು ತುಂಡು ಬಟ್ಟೆ ಬಿಟ್ಟು ಹೋದ ವಿಶ್ವನಾಯಕನ ನೆನಪಿಸು..

ಮಲಗಲು ಮೆತ್ತನೆ ಹಾಸಿಗೆ ಇಲ್ಲ  ಕೊರಗೇ
ಖರ್ಜೂರ ಎಲೆಗಳ ಮೇಲೆ ಮಲಗಿದ ವಿಶ್ವನಾಯಕನ
ಪುಣ್ಯ ದೇಹವ ನೆನಪಿಸು..

ಬಡತನ  ಎಂಬ ಚಿಂತೆಯೇ ಬಡವರ ಅತಿ ಹೆಚ್ಚು ಪ್ರೀತಿಸಿ ಬಡವರೊಂದಿಗೆ ಸ್ವರ್ಗದಿ ನಾನಿರುವನೆಂಬ ವಿಶ್ವನಾಯಕನ ಪುಣ್ಯವಚನವ ನೆನಪಿಸು..

ಜಗತ್ತು ನಿನ್ನನ್ನು ದ್ವೇಷಿಸುತ್ತಿದೆ ಎಂಬ ವಿಷಾದವೇ
ದ್ವೇಷಿಸಿದ ಜಗತ್ತಿಗಾಗಿ ದೇವನಲ್ಲಿ ಪ್ರಾರ್ಥಿಸಿದ ವಿಶ್ವನಾಯಕನ ನೆನಪಿಸು.

✒ಜಲೀಲ್ ಮುಕ್ರಿ